🎉 Up to 70% Off Selected ItemsShop Sale
HomeStore

ಬಂಡಲ್ ಕತೆಗಳು

Product image 1

ಬಂಡಲ್ ಕತೆಗಳು

ಬಂಡಲ್ ಕತೆಗಳು

ಹೂವುಗಳೇ ಸೇರಿಕೊಂಡು ಈ ಮನುಷ್ಯ ಜೀವಿಗಳ ಬಗ್ಗೆ ಮಾತಾಡಿಕೊಂಡರೆ ಹೇಗಿರುತ್ತದೆ, ಹಾಗಿದೆ ಈ ಕಿರುಗತೆ, ಪ್ರಫುಲ್ಲವಾದ ಭಂಗುರತೆಯೊಂದು ಪರಿಮಳ ತುಂಬಿಕೊಂಡು ಓಡಾಡಿದಂತೆ. ಒಂದು ನಿಶ್ಯಬ್ದ ಮನೆ, ನಿರ್ಜನ ಅಂಗಳ, ಮೂಕ ಹೂ ಮರ, ಗೇಟು, ಕಿಟಕಿ, ಗೇಟಿನಾಚೆ ಒಂದು ಲೋಕ, ಈಚೆ ಒಂದು ತಬ್ಬಲಿತನದ ದೈನಿಕ, ಎರಡರ ನಡುವೆ ತಂಗಾಳಿಯಂತೆ ಸುಳಿದಾಡುತ್ತ ಇಹದ ಪರಿಮಳದ ದಾರಿಯನ್ನು ಹೊಳೆಸುವ ಸೂಕ್ಷ್ಮ ಕಥನ. ನಮ್ಮ ನಮ್ಮ ನಿತ್ಯದಲ್ಲೇ ನಮ್ಮನ್ನು ಒರೆಗೆ ಹಚ್ಚಬಲ್ಲ ಸರಳ ಸಹಜ ನಿಗೂಢತೆಯೊಂದು ಇದೆ. ಇಲ್ಲೇ ಇದೆ. ಅದು ಕರೆದಾಗ ನಾವು ಕೇಳಿಸಿಕೊಳ್ಳಬೇಕು ಅಷ್ಟೇ! ಮತ್ತು ಅದನ್ನು ಆಲಿಸಲು ಮೊದಲು ಬೇಕಾದದ್ದು ನಮ್ಮೊಳಗಿನ ನಿಶ್ಯಬ್ದ...ಎಂಬುದು ಈ ಕಥೆಯ ಧ್ವನಿ, ಪ್ರತಿ ಜೀವಿಯೂ ಒಂದು ಪಯಣದಲ್ಲಿರುತ್ತಾಳೆ/ನೆ. ಈ ಭಿನ್ನ ಪಯಣದ ರೇಖೆಗಳು ಛಕ್ಕಂತ ಅಲ್ಲಲ್ಲಿ ಪರಸ್ಪರ ಸಂಧಿಸುವುದುಂಟು...ನೋಟವನ್ನೇ ತಿದ್ದುವಂತೆ, ಅಂತಃಕರಣವನ್ನು ಅರಳಿಸುವಂತೆ. ಅಂಥ ಸಂಧಿಸಮಯವೊಂದನ್ನು ಹೌದೋ ಅಲ್ಲವೋ ಎಂಬಂತೆ ಸ್ಪರ್ಶಿಸುವ ಯತ್ನ ಈ ಬರವಣಿಗೆಯದು. 'ಒಂದು ಉಸಿರನ್ನು ಎತ್ತಿ ಹಾಕಿ ಮತ್ತೆ ಕಾಯುತ್ತ ಕೂತರು' - ಇಂಥ ತಮ್ಮದೇ ಅಪ್ಪಟ ಒಕ್ಕಣಿಕೆಯ ಸುರೇಂದ್ರನಾಥ್, ಈ ಕಥೆಯ ಜೀವಾಳವೇ ಆಗಿರುವ ನೀರವವೊಂದು ನಮಗೆ ಕೇಳಿಸುವಂತೆ ಬರೆದಿದ್ದಾರೆ. ಪರಿಮಳವನ್ನು ಹೀರಲು ಮೂಗು ಸಾಕು, ಮೂಗುತಿ ಬೇಕಿಲ್ಲ, ಅಂಥ ಪ್ರಾಂಜಲ ಉಸಿರಾಟವನ್ನು ಈ ಕಥೆ ನನಗೆ ರವಾನಿಸಿದೆ.

ಜಯಂತ ಕಾಯ್ಕಿಣಿ ('ಹೂ ಮರದ ಮನೆ' ಕತೆಯ ಕುರಿತು)
$0.52

Original: $1.73

-70%
ಬಂಡಲ್ ಕತೆಗಳು

$1.73

$0.52

Product Information

Shipping & Returns

Description

ಹೂವುಗಳೇ ಸೇರಿಕೊಂಡು ಈ ಮನುಷ್ಯ ಜೀವಿಗಳ ಬಗ್ಗೆ ಮಾತಾಡಿಕೊಂಡರೆ ಹೇಗಿರುತ್ತದೆ, ಹಾಗಿದೆ ಈ ಕಿರುಗತೆ, ಪ್ರಫುಲ್ಲವಾದ ಭಂಗುರತೆಯೊಂದು ಪರಿಮಳ ತುಂಬಿಕೊಂಡು ಓಡಾಡಿದಂತೆ. ಒಂದು ನಿಶ್ಯಬ್ದ ಮನೆ, ನಿರ್ಜನ ಅಂಗಳ, ಮೂಕ ಹೂ ಮರ, ಗೇಟು, ಕಿಟಕಿ, ಗೇಟಿನಾಚೆ ಒಂದು ಲೋಕ, ಈಚೆ ಒಂದು ತಬ್ಬಲಿತನದ ದೈನಿಕ, ಎರಡರ ನಡುವೆ ತಂಗಾಳಿಯಂತೆ ಸುಳಿದಾಡುತ್ತ ಇಹದ ಪರಿಮಳದ ದಾರಿಯನ್ನು ಹೊಳೆಸುವ ಸೂಕ್ಷ್ಮ ಕಥನ. ನಮ್ಮ ನಮ್ಮ ನಿತ್ಯದಲ್ಲೇ ನಮ್ಮನ್ನು ಒರೆಗೆ ಹಚ್ಚಬಲ್ಲ ಸರಳ ಸಹಜ ನಿಗೂಢತೆಯೊಂದು ಇದೆ. ಇಲ್ಲೇ ಇದೆ. ಅದು ಕರೆದಾಗ ನಾವು ಕೇಳಿಸಿಕೊಳ್ಳಬೇಕು ಅಷ್ಟೇ! ಮತ್ತು ಅದನ್ನು ಆಲಿಸಲು ಮೊದಲು ಬೇಕಾದದ್ದು ನಮ್ಮೊಳಗಿನ ನಿಶ್ಯಬ್ದ...ಎಂಬುದು ಈ ಕಥೆಯ ಧ್ವನಿ, ಪ್ರತಿ ಜೀವಿಯೂ ಒಂದು ಪಯಣದಲ್ಲಿರುತ್ತಾಳೆ/ನೆ. ಈ ಭಿನ್ನ ಪಯಣದ ರೇಖೆಗಳು ಛಕ್ಕಂತ ಅಲ್ಲಲ್ಲಿ ಪರಸ್ಪರ ಸಂಧಿಸುವುದುಂಟು...ನೋಟವನ್ನೇ ತಿದ್ದುವಂತೆ, ಅಂತಃಕರಣವನ್ನು ಅರಳಿಸುವಂತೆ. ಅಂಥ ಸಂಧಿಸಮಯವೊಂದನ್ನು ಹೌದೋ ಅಲ್ಲವೋ ಎಂಬಂತೆ ಸ್ಪರ್ಶಿಸುವ ಯತ್ನ ಈ ಬರವಣಿಗೆಯದು. 'ಒಂದು ಉಸಿರನ್ನು ಎತ್ತಿ ಹಾಕಿ ಮತ್ತೆ ಕಾಯುತ್ತ ಕೂತರು' - ಇಂಥ ತಮ್ಮದೇ ಅಪ್ಪಟ ಒಕ್ಕಣಿಕೆಯ ಸುರೇಂದ್ರನಾಥ್, ಈ ಕಥೆಯ ಜೀವಾಳವೇ ಆಗಿರುವ ನೀರವವೊಂದು ನಮಗೆ ಕೇಳಿಸುವಂತೆ ಬರೆದಿದ್ದಾರೆ. ಪರಿಮಳವನ್ನು ಹೀರಲು ಮೂಗು ಸಾಕು, ಮೂಗುತಿ ಬೇಕಿಲ್ಲ, ಅಂಥ ಪ್ರಾಂಜಲ ಉಸಿರಾಟವನ್ನು ಈ ಕಥೆ ನನಗೆ ರವಾನಿಸಿದೆ.

ಜಯಂತ ಕಾಯ್ಕಿಣಿ ('ಹೂ ಮರದ ಮನೆ' ಕತೆಯ ಕುರಿತು)

You may also like

-70%NEW
Thumbnail 1

ಯುಗಾದಿ

$2.05

$0.61

-70%NEW
Thumbnail 1

ಮೋಹನಸ್ವಾಮಿ

$2.92

$0.88

NEW
Thumbnail 1

ಹಟ್ಟಿಯೆಂಬ ಭೂಮಿಯ ತುಣುಕು

$1.30

-70%NEW
Thumbnail 1

ಮನೀಷೆ

$1.30

$0.39

-70%NEW
Thumbnail 1

ಚೇಳು

$1.30

$0.39

NEW
Thumbnail 1

ವಿಷಮ ಭಿನ್ನ ರಾಶಿ

$3.03

NEW
Thumbnail 1

ಒಂದು ಚಿಟಿಕೆ ಮಣ್ಣು

$1.41

NEW
Thumbnail 1

ನಿರವಯವ

$1.35

NEW
Thumbnail 1

ಗೋಡೆಗೆ ಬರೆದ ನವಿಲು

$0.65

NEW
Thumbnail 1

ಕೇಪಿನ ಡಬ್ಬಿ

$1.62

NEW
Thumbnail 1

ಕನ್ನಡಿ ಹರಳು

$1.41

-70%NEW
Thumbnail 1

ಕಟ್ಟು ಕಥೆಗಳು

$1.62

$0.49

ಬಂಡಲ್ ಕತೆಗಳು | Harivu Books